Bhu Aadhaar:- ಜಮೀನು ಇರುವ ರೈತರು ʻಭೂ ಆಧಾರ್‌’ ಮಾಡಿಸುವುದು ಕಡ್ಡಾಯ.!

Bhu Aadhaar

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಮಂಗಳವಾರ ಮೋದಿ ಸರ್ಕಾರದಲ್ಲಿ ಸತತ ತಮ್ಮ ಏಳನೇ ಕೇಂದ್ರ ಬಜೆಟ್(Central Budget) ಅನ್ನು ಮಂಡಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಅನೇಕ ಭೂ ಸುಧಾರಣೆ ಕಾರ್ಯಕ್ರಮ ಘೋಷಣೆ ಮಾಡಲಾಗಿದೆ.

“ಭೂ-ಆಧಾರ್(Bhu-Aadhaar)” ಮತ್ತು ಇತರ ನಗರ ಭೂ ದಾಖಲೆ ಡಿಜಿಟಲೀಕರಣ ಕಾರ್ಯಕ್ರಮಗಳೆಂದು ಕರೆಯಲ್ಪಡುವ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಭೂಮಿ ಪಾರ್ಸೆಲ್‌ಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ (Unique Identification Number)ಯನ್ನು ಪ್ರಸ್ತಾಪಿಸಿದರು.

WhatsApp Group Join Now
Telegram Group Join Now

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಆರ್ಥಿಕ ಅಭಿವೃದ್ಧಿಗೆ ವ್ಯಾಪಕವಾದ ವಿಧಾನವನ್ನು ರೂಪಿಸಲು ಮತ್ತು ಮುಂದಿನ ಪೀಳಿಗೆಯ ಸುಧಾರಣೆಗಳಿಗೆ ವೇದಿಕೆಯನ್ನು ಹೊಂದಿಸಲು “ಆರ್ಥಿಕ ನೀತಿ ಚೌಕಟ್ಟನ್ನು” ರೂಪಿಸಲಿದೆ ಎಂದು ಹಣಕಾಸು ಸಚಿವರು ಹೇಳಿದರು .

ಈ ಸುದ್ದಿ ಓದಿ:- Lecturer Recruitment: ಸರ್ಕಾರಿ PU ಕಾಲೇಜ್ ಲೆಕ್ಚರರ್ ಹುದ್ದೆಗಳ ಬೃಹತ್ ನೇಮಕಾತಿ. ವೇತನ:- 43,280/- ಆಸಕ್ತರು ಅರ್ಜಿ ಸಲ್ಲಿಸಿ.!

ಹೌದು, ಗ್ರಾಮೀಣ ಪ್ರದೇಶದಲ್ಲಿ ಭೂಮಿಗೆ ವಿಶಿಷ್ಟ ಗುರುತಿನ ಸಂಖ್ಯೆ ಅಥವಾ ಭೂ ಆಧಾರ್ ನೀಡಲಾಗುವುದು. ಎಲ್ಲಾ ನಗರ ಭೂ ದಾಖಲೆಗಳ ಡಿಜಟಲೀಕರಣ ಮಾಡಲಿದ್ದು, ಈ ಮೂಲಕ ಭೂ ಆಕ್ರಮಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಭೂಸುಧಾರಣೆ ಕೈಗೊಳ್ಳಲು ಕೇಂದ್ರವು ರಾಜ್ಯಗಳೊಂದಿಗೆ ಕೆಲಸ ಮಾಡಲಿದೆ.

ಮುಂದಿನ ಮೂರು ವರ್ಷಗಳಲ್ಲಿ ಈ ಸುಧಾರಣೆ ಪೂರ್ಣಗೊಳಿಸಲಾಗುವುದು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಭೂ ಸಂಬಂಧಿತ ಸುಧಾರಣೆಗಳು ಮತ್ತು ಕ್ರಮಗಳನ್ನು ಎರಡು ರೀತಿಯಲ್ಲಿ ಕೈಗೊಳ್ಳಲಾಗುವುದು. ಒಂದು -ಭೂ ಆಡಳಿತ ಯೋಜನೆ ಮತ್ತು ನಿರ್ವಹಣೆ, ಎರಡು- ನಗರ ಯೋಜನೆ, ಬಳಕೆ ಮತ್ತು ಕಟ್ಟಡ ಬೈಲಾಗಳನ್ನು ಈ ಸುಧಾರಣಾ ಕ್ರಮಗಳು ಒಳಗೊಂಡಿದೆ.

ಗ್ರಾಮೀಣ ಭೂಮಿ ಸಂಬಂಧಿತ ಕ್ರಮಗಳು ಎಲ್ಲಾ ಜಮೀನುಗಳಿಗೆ ಭೂ ಪಾರ್ಸೆಲ್ ಗುರುತಿನ ಸಂಖ್ಯೆ ಅಥವಾ ಭೂ ಆಧಾರ್ ಒಳಗೊಂಡಿರುತ್ತದೆ. ನಕ್ಷೆಗಳ ಪ್ರಸ್ತುತ ಮಾಲೀಕತ್ವದ ಪ್ರಕಾರ ನಕ್ಷೆ, ಉಪ ವಿಭಾಗಗಳ ಸಮೀಕ್ಷೆ, ಭೂ ನೋಂದಣಿ ರಚನೆ, ರೈತರ ನೋಂದಣಿಗೆ ಲಿಂಕ್ ಮಾಡುವುದು ಪ್ರಮುಖ ಕ್ರಮಗಳಾಗಿವೆ. ಈ ಕ್ರಮಗಳಿಂದ ಕೃಷಿ ಸೇವೆ, ಸಾಲ ನೀಡಿಕೆ ಸುಲಭವಾಗಲಿದೆ.

ಈ ಸುದ್ದಿ ಓದಿ:- Gruhalakshmi: ಮನೆ ಯಜಮಾನಿಯರಿಗೆ ಗುಡ್‌ ನ್ಯೂಸ್‌ ನಿಮ್ಮ ಖಾತೆ ಸೇರಲಿದೆ 2 ತಿಂಗಳ ʻಗೃಹಲಕ್ಷ್ಮಿʼ ಹಣ.!

ನಗರ ಪ್ರದೇಶಗಳ ಭೂದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಆಸ್ತಿ ದಾಖಲೆ ನಿರ್ವಹಣೆ, ನವೀಕರಣ, ತೆರಿಗೆ ಆಡಳಿತಕ್ಕೆ ಐಟಿ ಆಧಾರಿತ ವ್ಯವಸ್ಥೆ ಸ್ಥಾಪಿಸಲಾಗುವುದು. ಇದರಿಂದ ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿ ಸುಧಾರಣೆಗೆ ಅನುಕೂಲವಾಗುತ್ತದೆ ಎನ್ನಲಾಗಿದೆ.

ಗ್ರಾಮೀಣ ಭೂಸುಧಾರಣೆಗಳಿಗಾಗಿ, ಎಲ್ಲಾ ಜಮೀನುಗಳಿಗೆ ವಿಶಿಷ್ಟ ಭೂ ಭಾಗದ ಗುರುತಿನ ಸಂಖ್ಯೆ (ULPIN) ಅಥವಾ “ಭೂ-ಆಧಾರ್” ನಿಯೋಜಿಸುವುದು, ಭೂಪಟಗಳ ಡಿಜಿಟಲೀಕರಣ, ಪ್ರಸ್ತುತ ಮಾಲೀಕತ್ವದ ಪ್ರಕಾರ ನಕ್ಷೆ ಉಪ-ವಿಭಾಗಗಳ ಸಮೀಕ್ಷೆ, ಭೂ ನೋಂದಾವಣೆ ಸ್ಥಾಪನೆ ಮತ್ತು ಅದನ್ನು ಲಿಂಕ್ ಮಾಡುವುದು ಕ್ರಮಗಳು.

ರೈತರ ನೋಂದಣಿಗೆ ನಗರ ಪ್ರದೇಶಗಳಲ್ಲಿ, ಜಿಐಎಸ್ ಮ್ಯಾಪಿಂಗ್ ಸಹಾಯದಿಂದ ಭೂಮಿಯನ್ನು ಡಿಜಿಟಲೀಕರಣಗೊಳಿಸಲಾಗುವುದು. ಆಸ್ತಿ ದಾಖಲೆ ನಿರ್ವಹಣೆ, ನವೀಕರಣ ಮತ್ತು ತೆರಿಗೆ ಆಡಳಿತಕ್ಕಾಗಿ ಐಟಿ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು. ಈ ಕ್ರಮವು ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ಈ ಸುದ್ದಿ ಓದಿ:- Montessori:- 5,000 ಟೀಚರ್ ಗಳ ನೇಮಕಾತಿಗೆ ಅಧಿಸೂಚನೆ PUC ಪಾಸ್ ಆದವರು ಅರ್ಜಿ ಸಲ್ಲಿಸಿ.!

ಮುಂದಿನ ಮೂರು ವರ್ಷಗಳಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ) ವ್ಯಾಪ್ತಿಯೊಳಗೆ ಭೂಮಿ ಮತ್ತು ರೈತರ ಡೇಟಾ ಸೇರಿದಂತೆ ಕೃಷಿ ಡೇಟಾವನ್ನು ತರಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment