Free Education
ರಾಜ್ಯ(State)ದಲ್ಲಿನ ಅಂಗನವಾಡಿ ಕೇಂದ್ರ(Anganwadi Centre)ಗಳನ್ನು ‘ಸರ್ಕಾರಿ ಮಾಂಟೆಸ್ಸರಿ(Government Montessori)’ ಶಾಲೆಗಳಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿದ್ದು, ಮೊದಲ ಹಂತದಲ್ಲಿ 9 ಸಾವಿರ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್ಕೆಜಿ ಹಾಗೂ ಯುಕೆಜಿ ಬೋಧನೆ ಶುರು ಮಾಡಲು ಈ ಮೊದಲು ಸೂಚಿಸಲಾಗಿತ್ತು. ಈ ಬೆನ್ನಲ್ಲೇ ರಾಜ್ಯದ ಅಂಗನವಾಡಿಗಳಲ್ಲಿ ಎಲ್ಕೆಜಿ(LKG), ಯುಕೆಜಿ (UKG) ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.
ಈ ಸುದ್ದಿ ಓದಿ:- Bank Service Charges: ಬ್ಯಾಂಕ್ ಗ್ರಾಹಕರಿಗೆ ಬೇಸರದ ಸುದ್ದಿ, ಇನ್ಮುಂದೆ ಈ ಬ್ಯಾಂಕುಗಳ ಸರ್ವಿಸ್ ಜಾರ್ಜ್ ಹೆಚ್ಚಾಗಳಿದೆ.!
ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (LKG, UKG) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.
ಅಂಗನವಾಡಿ ಕೊಡುಗೆ ಅಪಾರ
ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ.
ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗುಣಮಟ್ಟದ ಶಿಕ್ಷಣ ನೀಡುವುದೇ ಗುರಿ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಬಯಸುವುದು ಪ್ರತಿಯೊಬ್ಬ ಪಾಲಕರ ಕನಸಾಗಿರುತ್ತದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ. ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು. ನಾವೇ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡೋಣ ಎಂದರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಮಾರಂಭದಲ್ಲಿ ಹಂಪಿ ಕನ್ನಡ ವಿ.ವಿಯ ನಿವೃತ್ತ ಪ್ರಾಧ್ಯಾಪಕರು ಹಾಗೂ ಅಂಕಣಕಾರರಾದ ಟಿ.ಆರ್.ಚಂದ್ರಶೇಖರ್, ಸಿ.ಐ.ಟಿ.ಯು ಕರ್ನಾಟಕ ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಎಸ್. ವರಲಕ್ಷ್ಮೀ, ಕಾರ್ಯದರ್ಶಿ ಯಮುನಾ ಗಾಂವ್ಕರ್, ಕಾರ್ಯಾಧ್ಯಕ್ಷರಾದ ಶಾಂತ ಎನ್.ಘಂಟೆ, ಖಜಾಂಚಿ ಜಿ.ಕಮಲಾ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದ ಸೇರಿದಂತೆ ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸುದ್ದಿ ಓದಿ:- Mosquito Net: ರಾಜ್ಯದಲ್ಲಿ ‘ಡೆಂಗ್ಯೂ’ ಪ್ರಕರಣ ಹೆಚ್ಚಳ: ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಸರ್ಕಾರದಿಂದ ಉಚಿತ ಸೊಳ್ಳೆ ಪರದೆ ವಿತರಣೆ.!
ಇನ್ನೂ, ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4-6 ವರ್ಷ, ಯುಕೆಜಿ ಪ್ರವೇಶಕ್ಕೆ 5-7 ವರ್ಷ ನಿಗದಿ ಮಾಡಲಾಗಿದೆ. ಇದೇ ವೇಳೆ 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 6-8 ವರ್ಷ ನಿಗದಿ ಪಡಿಸಲಾಗಿದೆ.
8 ವರ್ಷ ಮೀರಿದರೂ ಶಾಲೆಗೆ ಸೇರದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಮಕ್ಕಳನ್ನು ಅವರ ವಯಸ್ಸಿಕೆ ತಕ್ಕಂತೆ ತರಗತಿಗಳ ಪ್ರವೇಶ ನೀಡಲಾಗುತ್ತದೆ. ಈ ಮೂಲಕ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಇದ್ದ ವಯೋಮಿತಿ ಗೊಂದಲ ನಿವಾರಣೆಯಾದಂತಾಗಿದೆ.