ರೈತನು ಈ ದೇಶದ ಆರ್ಥಿಕತೆಯ ಬೆನ್ನೆಲುಬು. ಕೃಷಿ ಕ್ಷೇತ್ರವು ಅಭಿವೃದ್ಧಿ ಹೊಂದಿದ್ದಷ್ಟು ದೇಶದ ಏಳಿಗೆಯೂ ಆಗುತ್ತದೆ. ಆಹಾರ ಪೂರೈಕೆಯ ಉದ್ದೇಶದಿಂದ ಕೂಡ ಇದನ್ನು ಪ್ರಥಮ ಆದ್ಯತೆಯಾಗಿ ಕಾಣಲೇಬೇಕು. ನಮ್ಮ ದೇಶವು ಮೂಲತಃ ಹಳ್ಳಿಗಳ ದೇಶವಾಗಿದೆ ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡವಾರು ಅಧಿಕ ಜನ ತಮ್ಮ ಜೀವನೋಪಾಯಕ್ಕಾಗಿ ಕೃಷಿಯನ್ನು ಅನುಸರಿಸಿದ್ದಾರೆ.
ಹಾಗೆಯೇ ನಮ್ಮ ದೇಶದಲ್ಲಿ ಕೃಷಿಗೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಭಾರತದಲ್ಲಿನ ವ್ಯವಸಾಯವು ಮಳೆ ಜೊತೆ ಆಡುವ ಜೂಜಾಟ ಎಂದು ಅರ್ಥಶಾಸ್ತ್ರಜ್ಞರು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಈ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ವಿಶೇಷ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢನಾಗಿ ಮಾಡುವ ಮತ್ತು ರೈತರ ಆದಾಯ ಹೆಚ್ಚಿಸುವ ಕಾರ್ಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾಡುತ್ತಿವೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ರೈತರಿಗಾಗಿ ಅನೇಕ ಸಬ್ಸಿಡಿ ಸಹಾಯಧನದ ಯೋಜನೆಗಳ ಪ್ರಯೋಜನಗಳು ದೊರೆಯುತ್ತಿವೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕಿಸಾನ್ ಮನ್ ಧನ್ ಯೋಜನೆ, ಬಡ್ಡಿ ರಹಿತ ಕೃಷಿ ಸಾಲ, ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ರಸಗೊಬ್ಬರಗಳ ವಿತರಣೆ, ಗಂಗಾ ಕಲ್ಯಾಣ ಯೋಜನೆ ಮೂಲಕ ಉಚಿತವಾಗಿ.
ನೀರಾವರಿ ಸೌಲಭ್ಯ ಮತ್ತು ಕೃಷಿಗೆ ಹೊಂದಿಕೊಂಡಂತಹ ಉಪಕಸುಬುಗಳಾದ ಹೈನುಗಾರಿಕೆ, ಮೀನು ಸಾಕಾಣಿಕೆ, ಜೇನು ಸಾಕಾಣಿಕೆ, ಕುರಿ ಕೋಳಿ ಮೇಕೆ ಸಾಕಾಣಿಕೆ ಇತ್ಯಾದಿಗಳಿಗೆ ಸರ್ಕಾರದಿಂದ ಸಹಾಯ ಸಿಗುತ್ತಿರುವುದು ಇದನ್ನೆಲ್ಲ ಕೂಡ ಹೆಸರಿಸಬಹುದು. ಇವುಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಬಹಳ ವಿಶೇಷ ಎನ್ನಬಹುದಾಗಿದೆ ಯಾಕೆಂದರೆ ಮಳೆ ಆಶ್ರಿತ ಭೂಮಿ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಆಯ್ದ ಕೆಲ ವರ್ಗಗಳ ಕುಟುಂಬದ ರೈತನಿಗೆ ತನ್ನ ಜಮೀನಲ್ಲಿ ಉಚಿತವಾಗಿ ಬೋರ್ವೆಲ್ ಕೊರೆಸಿ ಕೊಡುವ ಯೋಜನೆ ಇದಾಗಿದೆ.
ಈ ಮೇಲೆ ಹೇಳಿದಂತೆ ವ್ಯವಸಾಯ ಕ್ಷೇತ್ರಕ್ಕೆ ಮಳೆ ಜೊತೆ ಎದುರಾಗುವ ಸವಾಲುಗಳನ್ನು ಎದುರಿಸಲು ನೀರಿನ ಅನುಕೂಲತೆಯ ಅವಶ್ಯಕತೆ ಇರುತ್ತದೆ ಆದರೆ ಎಲ್ಲ ರೈತರಿಗೂ ಕೂಡ ಲಕ್ಷಾಂತರ ಹಣ ಖರ್ಚು ಮಾಡಿ ತಮ್ಮ ಜಮೀನಿಗೆ ಬೋರ್ವೆಲ್ ಕೊರೆಸುವ ಸಾಮರ್ಥ್ಯ ಇರುವುದಿಲ್ಲ. ಹೀಗಾಗಿ ಗಂಗಾ ಕಲ್ಯಾಣ ಯೋಜನೆ ಮೂಲಕ ಉಚಿತವಾಗಿ ಬೋರ್ವೆಲ್ ಕೊರಿಸಲು ಮತ್ತು ಪಂಪ್ಸೆಟ್ ಮಾಡಲು ಬೇಕಾದ ಇತರೆ ಪರಿಕರಗಳನ್ನು ಉಚಿತವಾಗಿ ನೀಡಲು ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆ ಪ್ರಯೋಜನ ಪಡೆಯಲು ಕಂಡಿಷನ್ ಗಳು ಏನು? ಹೇಗೆ ಅರ್ಜಿ ಸಲ್ಲಿಸಬೇಕು? ಏನೆಲ್ಲ ದಾಖಲೆಗಳನ್ನು ನೀಡಬೇಕು? ಎನ್ನುವುದರ ವಿವರವನ್ನು ಎಲ್ಲ ರೈತರಿಗೂ ಅನುಕೂಲ ಮಾಡಿಕೊಡುವ ಸಲುವಾಗಿ ಈ ಲೇಖನದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ತಪ್ಪದೇ ಈ ಉಪಯುಕ್ತ ಮಾಹಿತಿಯನ್ನು ಹೆಚ್ಚಿನ ರೈತರ ಜೊತೆ ಶೇರ್ ಮಾಡಿ.
ಯೋಜನೆಗೆ ಹೆಸರು:- ಗಂಗಾ ಕಲ್ಯಾಣ ಯೋಜನೆ
ಯೋಜನೆಯ ಉದ್ದೇಶ:-
ಅರ್ಹ ರೈತರ ಜಮೀನಿನಲ್ಲಿ ಉಚಿತವಾಗಿ ಬೋರ್ವೆಲ್ ಕೊರೆಯುವ ಮೂಲಕ ಹಾಗೂ ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದು ಮತ್ತು ಜಮೀನಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಪಂಪ್-ಮೋಟಾರ್ ಮೂಲಕ ನೀರೆತ್ತುವುದು ಈ ಯೋಜನೆಯ ಉದ್ದೇಶವಾಗಿದೆ.
ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಲು ಇರುವ ಕಂಡಿಷನ್ ಗಳು:-
1. ರಾಜ್ಯದ ಆಯ್ದ ಕೆಲವು ನಿಗಮಗಳ ರೈತರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅವುಗಳ ಪಟ್ಟಿ ಇಂತಿದೆ:-
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
*ಪರಿಶಿಷ್ಟ ಜಾತಿ- ವರ್ಗಗಳ ಅಭಿವೃದ್ಧಿ ನಿಗಮ
*ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
*ವಿಶ್ವಕರ್ಮ ಅಭಿವೃದ್ಧಿ ನಿಗಮ
*ಉಪ್ಪಾರ ಅಭಿವೃದ್ಧಿ ನಿಗಮ
*ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
* ನಿಜಗುಣ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
* ಬೋವಿ ಸಮುದಾಯದ ಅಭಿವೃದ್ಧಿ ನಿಗಮ
2. 20 ಗುಂಟೆ – 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಯ ರೈತರಿಗೆ ಕನಿಷ್ಠ 1 ಎಕರೆ.
* ಅರ್ಜಿದಾರ ಯಾವುದೇ ಕೇಂದ್ರ-ರಾಜ್ಯ ಸರ್ಕಾರದ ಹುದ್ದೆಯಲ್ಲಿ ಇರಬಾರದು, ಈಗಾಗಲೇ ಈ ಯೋಜನೆಯ ಪ್ರಯೋಜನ ಪಡೆದಿರಬಾರದು
* ರಾಜ್ಯದ ಕಾಯಂ ನಿವಾಸಿ ಆಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ಕೊಟ್ಟು ಹೆಚ್ಚಿನ ಮಾಹಿತಿ ಪಡೆದು ಮಾರ್ಗದರ್ಶನದೊಂದಿಗೆ ಅರ್ಜಿ ಸಲ್ಲಿಸಬಹುದು
ಬೇಕಾಗುವ ದಾಖಲೆಗಳು:-
* ರೈತನ ಭಾವಚಿತ್ರ
* ಬ್ಯಾಂಕ್ ಪಾಸ್ಬುಕ್
* ಜಮೀನಿನ ದಾಖಲೆ
* ಜಾತಿ-ಆದಾಯ ಪ್ರಮಾಣ ಪತ್ರ
* ಆಧಾರ್ ಕಾರ್ಡ್
* ಪಾನ್ ಕಾರ್ಡ್
* ಇನ್ನಿತರ ಪ್ರಮುಖ ದಾಖಲೆಗಳು.