Ganga kalyana Scheme: ಬೋರ್ವೆಲ್ ಕೊರಿಸಲು ಸರ್ಕಾರದಿಂದ 4 ಲಕ್ಷ ಸಬ್ಸಿಡಿ.!

Ganga kalyana Scheme:

ರಾಜ್ಯ ಸರ್ಕಾರ(State Govt)ವು ರೈತರ ಕೃಷಿ ನೆಲದಲ್ಲಿ(Agricultural land of farmers) ನೀರಾವರಿ ಸೌಲಭ್ಯ(Irrigation facility) ಒದಗಿಸಿಕೊಡುವುದಕ್ಕಾಗಿ ಗಂಗಾ ಕಲ್ಯಾಣ ಯೋಜನೆ(Ganga kalyana Scheme)ಯನ್ನು ಜಾರಿಗೆ ತಂದಿದೆ.

ಈ ಒಂದು ಯೋಜನೆಯ ಮೂಲಕ ರೈತರ ಜಮೀನಿಗೆ ಬೋರ್ವೆಲ್ (borewell) ಕೊರೆಸುವುದಕ್ಕೆ, ಕೊಳವೆ ಬಾವಿ ಕೊರೆಸುವುದಕ್ಕೆ ಸರ್ಕಾರದಿಂದ ಸಾಲ ಸೌಲಭ್ಯ (Loan Facility) ಸಿಗಲಿದ್ದು, ಇದರ ಅನುಕೂಲ ಪಡೆಯುವುದು ಹೇಗೆ? ಈ ಯೋಜನೆಗೆ ಅಪ್ಲೈ ಮಾಡುವುದು ಹೇಗೆ? ಅರ್ಹತೆಯ ಮಾನದಂಡಗಳು ಏನೇನು? ಇದೆಲ್ಲದರ ಬಗ್ಗೆ ಪೂರ್ತಿಯಾಗಿ ತಿಳಿದುಕೊಳ್ಳೋಣ ಬನ್ನಿ…

WhatsApp Group Join Now
Telegram Group Join Now
ಗಂಗಾ ಕಲ್ಯಾಣ ಯೋಜನೆಯಲ್ಲಿ ಸಿಗುವ ಹಣವೆಷ್ಟು?

ಈ ಯೋಜನೆಯ ಮೂಲಕ ನೀವು ಎಷ್ಟು ಹಣ ಪಡೆಯಬಹುದು ಎಂದು ನೋಡುವುದಾದರೆ, ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ. ಈ ಯೋಜನೆ ಅಡಿಯಲ್ಲಿ ರೈತನ ಬರಗಾಲದ ಸಂಕಷ್ಟವನ್ನು ತಪ್ಪಿಸಲು ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸಿದೆ.

ಇನ್ನು 50 ಸಾವಿರಕ್ಕೆ 4% ಬಡ್ಡಿ ದರದಲ್ಲಿ ನೀವು ಸಾಲ ಮರುಪಾವತಿ (Loan Re Payment) ಮಾಡಬೇಕಾಗುತ್ತದೆ. ಇನ್ನುಳಿದ ಬೇರೆ ಜಿಲ್ಲೆಗಳಲ್ಲಿ ₹3.75 ಲಕ್ಷ ಸಾಲ ಸಿಗಲಿದ್ದು, ₹3.25 ಲಕ್ಷ ಸಹಾಯಧನ ಆಗಿರಲಿದೆ, ಇನ್ನು ₹50 ಸಾವಿರ ರೂಪಾಯಿಗಳನ್ನು 4% ಬಡ್ಡಿದರಲ್ಲಿ ಮರುಪಾವತಿ ಮಾಡಬೇಕಾಗುತ್ತದೆ.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.?

– ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಯೋಮಿತಿಯು 18 ವರ್ಷ ಮೇಲ್ಪಟ್ಟಿರಬೇಕು.
– ಅಷ್ಟೇ ಅಲ್ಲದೆ ಅರ್ಜಿದಾರನು ಒಂದೇ ಸ್ಥಳದಲ್ಲಿ ಎರಡು ಎಕ್ಕರೆ ಅಥವಾ 5 ಎಕರೆ ಜಮೀನನ್ನು ಹೊಂದಿರಬೇಕು.
– ಜಮೀನನ್ನು ಹೊಂದಿರುವ ಸ್ಥಳದಲ್ಲಿ ಯಾವುದೇ ರೀತಿಯ ನೀರಾವರಿ ವ್ಯವಸ್ಥೆಯು ಆ ಜಮೀನಿಗೆ ಇರಬಾರದು.

ಅಲ್ಲಿನ ನಿಗಮಕ್ಕೆ ಸಂಬಂಧಪಟ್ಟವರ ವರ್ಗಕ್ಕೆ ಮಾತ್ರ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ .
– ಅಷ್ಟೇ ಅಲ್ಲದೆ ಕೊಡಗು, ಉತ್ತರ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ, ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಎಕರೆ ಜಮೀನನ್ನು ಹೊಂದಿರಬೇಕು.
– ಅಷ್ಟೇ ಅಲ್ಲದೆ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇರಬೇಕು.

ಗಂಗಾ ಕಲ್ಯಾಣ ಯೋಜನೆಗೆ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

– ಅರ್ಜಿದಾರನ ಆಧಾರ್ ಕಾರ್ಡ್
– ಜಾತಿ ಮತ್ತು ಆದಾಯ ಪ್ರಮಾಣ ಪತ್ರ
– ಬ್ಯಾಂಕ್ ಪಾಸ್ ಬುಕ್
– ಸ್ವಂತ ಜಮೀನಿನ ಪಹಣಿ
– ಅರ್ಜಿದಾರನ ಭಾವಚಿತ್ರ
– BPL ರೇಷನ್ ಕಾರ್ಡ್
– ಮೊಬೈಲ್ ಸಂಖ್ಯೆ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನಾಂಕವಾಗಿದೆ. ಆದ್ದರಿಂದ ಯಾರೆಲ್ಲ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ. ಅವರು ಬೇಗನೆ ಅರ್ಜಿ ಸಲ್ಲಿಸಿ.

ಯಾವೆಲ್ಲಾ ವರ್ಗದವರು ಅರ್ಜಿ ಸಲ್ಲಿಸಬಹುದು?

* ಉಪ್ಪಾರ ಅಭಿವೃದ್ಧಿ ನಿಗಮ
* ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
* ಮರಾಠ ಅಭಿವೃದ್ಧಿ ನಿಗಮ
* ವಿಶ್ವಕರ್ಮ ಅಭಿವೃದ್ಧಿ ನಿಗಮ
* ಮಡಿವಾಳ ಮಾಚದೇವ ಅಭಿವೃದ್ಧಿ ನಿಗಮ
* ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
* ಸವಿತಾ ಸಮಾಜ ಅಭಿವೃದ್ಧಿ ನಿಗಮ
* ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ
* ಒಕ್ಕಲಿಗ ಅಭಿವೃದ್ಧಿ ನಿಗಮ

ಯೋಜನೆಗೆ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು.?

ನಿಮ್ಮ ಹತ್ತಿರದ ಗ್ರಾಮ ಒನ್ / ಕರ್ನಾಟಕ ಒನ್ ಮತ್ತು ಸೈಬರ್ ಸೆಂಟರ್ ಗಳಲ್ಲಿ ಭೇಟಿಯನ್ನು ನೀಡಿ. ಆನ್ಲೈನ್ ಮೂಲಕ ನೀವು ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಗಂಗಾ ಕಲ್ಯಾಣ ಯೋಜನೆಗೆ ಆನ್ಲೈನ್ ಅರ್ಜಿ ಸಲ್ಲಿಕೆ ಮಾತ್ರ ಮಾಡಬಹುದು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment